September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

ಬೆಳ್ತಂಗಡಿ : ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ‌.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮಹಮ್ಮದ್ ರಫೀಕ್ ಯಾನೆ ಅಪ್ಪಿ ಎಂಬಾತನ ಮನೆಯಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತಂದು ಅಕ್ರಮ ದನಗಳನ್ನು ವಧೆ ಮಾಡುತ್ತಿರುವ ಮಾಹಿತಿ ಮೇರೆಗೆ ಸೆ.4 ರಂದು ರಾತ್ರಿ 9 ಗಂಟೆಗೆ ಮೇಲಾಧಿಕಾರಿಗಳಿಂದ ಸರ್ಚ್ ವಾರಂಟ್ ಪಡೆದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದಾಗ ಮೂರು ಕತ್ತಿ,ಎರಡು ಮರದ ಹಿಡಿ ಇರುವ ಚೂರಿ,ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ, ಒಂದು ಮರದ ತುಂಡು, ಒಂದು ನೀಲಿ ಟರ್ಪಾಲು, ಜೀವಂತ ಒಂದು ಹಸು ಮತ್ತು ಒಂದು ಕರು, ದನದ ತ್ಯಾಜ್ಯ ತುಂಬಿದ ಒಂದು ಓಮಿನಿ ಕಾರು, 9 ಕಡಿದ ದನದ ತಲೆಗಳನ್ನು ಬೆಳ್ತಂಗಡಿ ಪಶು ಇಲಾಖೆಯ ವೈದ್ಯರನ್ನು ಕರೆದು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.4 ರಂದು ಕಲಂ 112(2),303(2) BNS 2023 ಮತ್ತು ಕಲಂ 4,5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಅಡಿಯಲ್ಲಿ ಆರೋಪಿ ಮಹಮ್ಮದ್ ರಫೀಕ್ ಯಾನೆ ಅಪ್ಪಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ದಾಳಿ ವೇಳೆ ಪರಾರಿಯಾಗಿದ್ದಾರೆ. ಪ್ರಮುಖ ಆರೋಪಿ ಮೊಹಮ್ಮದ್‌ ರಫೀಕ್ ಯಾನೆ ಅಪ್ಪಿಗೆ ಬೆಳ್ತಂಗಡಿ ಪೊಲೀಸರು ಹಲವು ಭಾರಿ ಎಚ್ಚರಿಕೆ ನೀಡಿದ್ದರು ಈತ ಮತ್ತೆ ದನ ವಧೆ ಮಾಡುವ ದಂಧೆ ಮುಂದುವರಿಸಿದ್ದ ಎನ್ನಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹೆಚ್ ಮಾದರ ಹಾಗೂ ಸಿಬ್ಬಂದಿ ಶ್ರೀನಿವಾಸ್, ಸತೀಶ್, ಜಗದೀಶ್ ಚಾಲಕ ಧರೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!