23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ, ಇದರ 2024-25 ನೇ ವರ್ಷದ ವಾರ್ಷಿಕ ಮಹಾಸಭೆಯು ಸೆ. 04 ರಂದು ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.

ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ರವರು ವಹಿಸಿ ಮಾತನಾಡಿ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು ರೂ. 408 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ. 9252494.31 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಡ್ ವಿತರಣೆ ಮಾಡಲಾಗಿದೆ ಎಂದರು.

ಸಂಘವು ಆಡಿಟ್ ವರ್ಗೀಕರಣದಲ್ಲಿ ಎ ವರ್ಗ ಹೊಂದಿದ್ದು,ಪ್ರಾರಂಭದಲ್ಲಿ ನಿಧನ ಹೊಂದಿದ  ಸಂಘದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು . 

ಈ ಸಂದರ್ಭದಲ್ಲಿ ನಿರ್ದೇಶಕರಾದ ಅರುಣ ಕುಮಾರ್, ಗುರುರಾಜ್ ಅಂತರ, ಅರವಿಂದ ಕಾರಂತ ಕೆ. , ಅನಿಲ್ ಪ್ರಕಾಶ್ ಡಿ’ಸೋಜಾ, ಬಾಲಕೃಷ್ಣ ಗೌಡ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಶ್ರೀಮತಿ ವಾರಿಜ ಎಸ್ ಗೌಡ. ಅಣ್ಣು ನಾಯ್ಕ , ಸಾದು ಎಂ, ಮತ್ತು ಸಂಘದ , ಸುದರ್ಶನ್ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಸದಾಶಿವ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ಸಿ ರೈ ವರದಿ ಮಂಡಿಸಿದರು. ಸಿಬ್ಬಂದಿ ಮೋಹನ ಗೌಡ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ರಜತ ಗೌಡ ವಂದಿಸಿದರು.

Related posts

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya
error: Content is protected !!