23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸೆ.5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.

ಸಂಘವು ವರದಿ ಸಾಲಿನಲ್ಲಿ ರೂ.1100 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.3.00ಕೋಟಿ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಸದಸ್ಯರಿಗೆ ಶೇ.18 ಡಿವಿಡೆಂಟ್ ಘೋಷಿಸಿದರು.


ಬೆಳ್ತಂಗಡಿಯಲ್ಲಿ ಸೊಸೈಟಿಗೆ 11 1/2 ಸೆಂಟ್ಸ್ ಜಾಗ ಖರೀದಿ ಮಾಡಲಾಗಿದೆ. 2030 ಕ್ಕೆ ಸೊಸೈಟಿಗೆ ಬೆಳ್ಳಿ ಹಬ್ಬ ಸಂದರ್ಭದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಈ ವರ್ಷದಲ್ಲಿ ಧರ್ಮಸ್ಥಳದಲ್ಲಿ ಒಂದು ಶಾಖೆ ಹಾಗೂ ಮಂಗಳೂರಿನಲ್ಲಿ ಮೂರು ಶಾಖೆ ಒಟ್ಟು 4 ಶಾಖೆ ಪ್ರಾರಂಭಗೊಳ್ಳಲಿದೆ ಎಂದರು.

ಮುಖ್ಯ ಕಾರ್ಯನಿರ್ವಣಧಿಕಾರಿ ಸುಜಯ್ ಶೆಟ್ಟಿ ವರದಿ ಮಂಡಿಸಿದರು

ವೇದಿಕೆಯಲ್ಲಿ ನಿರ್ದೇಶಕರಾದ ಎಂ. ಜಿ. ಶೆಟ್ಟಿ.ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ, ಕೃಷ್ಣ ರೈ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ, ಜಯರಾಮ ಶೆಟ್ಟಿ ಮುಂಡಾಡಿ ಗುತ್ತು, ಸಾರಿಕಾ ಶೆಟ್ಟಿ, ವಿಜಯ ಬಿ. ಶೆಟ್ಟಿ ಖಾಯಂ ಆಹ್ವಾನಿತರು, ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.

ಸಂಸ್ಥೆಯ ಮಾರ್ಗದರ್ಶಕರಾದ ಉದ್ಯಮಿ ಶಶಿಧರ ಶೆಟ್ಟಿ, ಜಯರಾಮ್ ಶೆಟ್ಟಿ ಅವರ ಸಾಧನೆಯನ್ನು ಸಭೆಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷ ಜಯರಾಮ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ದೇರಳಕಟ್ಟೆ ಶಾಖೆಯಲ್ಲಿ ಕೆಲಸ ಮಾಡಿದ ನವೀನ್ ರೈರವನ್ನು ಗೌರವಿಸಿ ಬೀಳ್ಕೊಡಲಾಯಿತು.
ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮವನ್ನು ನಿರೂಪಿಸಿ, ಉಪಾಧ್ಯಕ್ಷ ಜಯಂತ ಶೆಟ್ಟಿ ಸ್ವಾಗತಿಸಿ, ನಿರ್ದೇಶಕರಾದ ಸೀತಾರಾಮ್ ಶೆಟ್ಟಿ ಧನ್ಯವಾದವಿತ್ತರು.

Related posts

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!