September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಜೆಸಿಐ ಭಾರತದ ವಲಯ15 ರ ನೂತನ ಜೇಸಿಗಳಿಗೆ ಚಿಗುರು ತರಬೇತಿ ಕಾರ್ಯಾಗಾರ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಜೆಸಿಐ ಬೆಳ್ತಂಗಡಿಯ ಆತಿಥ್ಯದಲ್ಲಿ ಆ. 31 ರಂದು ನಡೆಯಿತು.

ಜೆಸಿಐ ವಲಯ15 ವಲಯಾಧ್ಯಕ್ಷ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ ಜೆಸಿಐ ವಲಯ15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಭಾಗವಹಿಸಿ ನೂತನ ಜೇಸಿಗಳನ್ನು ಉದ್ದೇಶಿಸಿ ಜೇಸಿಯಿಂದ ಸಮಾಜದಲ್ಲಿ ನಾವು ಹೇಗೆ ಗುರುತಿಸಿಕೊಳ್ಳಬಹುದು ಹಾಗೂ ನಮ್ಮನ್ನು ಹೇಗೆ ತೊಡಗಿಸಿಕೊಳ್ಳುವ ಮಾತಾನಾಡಿದರು.

ಗೌರವ ಅತಿಥಿಯಾಗಿ ಕುಂದಾಪುರದ ಉದ್ಯಮಿ ಹುಸೈನ್ ಹೈಕಾಡಿ, ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ನಿರ್ದೇಶಕ ವಿಘ್ನೇಶ್ ಪ್ರಸಾದ್ ವಲಯ15 ಪ್ರಾಂತ್ಯ ಡಿ ಯ ವಲಯ ಉಪಾಧ್ಯಕ್ಷ ರಂಜೀತ್ ಎಚ್‌ಡಿ, ಇನ್ನೊರ್ವ ಉಪಾಧ್ಯಕ್ಷ ಸಂತೋಷ್ ಶೆಟ್ಟಿ ವಿಟ್ಲ ಉಪಸ್ಥಿತರಿದ್ದರು. ಸಭಾಧ್ಯಕ್ಷರಾಗಿ ಬ್ರಹ್ಮಾವರದ ಯಶವಂತ ಕುಮಾರ್ ಸಭೆ ನಡೆಸಿ ಕೊಟ್ಟರು.

ಜೆಸಿಐ ಬೆಳ್ತಂಗಡಿಯ ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ಸಭೆಗೆ ಸ್ವಾಗತಿಸಿದರು. ವಲಯ ಕಾರ್ಯದರ್ಶಿ ರವಿಚಂದ್ರ ಪಾಟಾಳಿ ವಂದಿಸಿದರು. ಚಿಗುರು ಕಾರ್ಯಕ್ರಮ ನಿರ್ದೇಶಕಿ ಹೇಮಾವತಿ ಕೆ ಇವರು ಕಾರ್ಯಾಗಾರ ಸಂಯೋಜಿಸಿದರು. ಜೇಸಿ ಸುಧೀರ್ ಕೆಎನ್, ಶ್ರೇಯಾ ಶೆಟ್ಟಿ, ಮಮಿತಾ ಸುಧೀರ್, ಭವ್ಯಶ್ರೀ ಕೀರ್ತಿರಾಜ್, ಅನುದೀಪ್ ಜೈನ್, ಪ್ರಮೋದ್ ಕೆ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು, ಮಧುರ ರಾಘವ್ ಜೇಸಿ ವಾಣಿ ಉದ್ಘೋಷಿಸಿದರು. ರಾಷ್ಟ್ರೀಯ ತರಬೇತುದಾರ ಡಾ. ರಾಘವೇಂದ್ರ ಹೊಳ್ಳ ಹಾಗೂ ವಲಯ ತರಬೇತುದಾರೆ ಅಶ್ವಿನಿ ಐತಾಳ್ ನವ ಜೇಸಿಗಳಿಗೆ ತರಬೇತಿಯನ್ನು ನಡೆಸಿ ಕೊಟ್ಟರು. ಉಡುಪಿ ಮತ್ತು ದಕ್ಷಿಣ ಕನ್ನಡದ ನೂತನ ಜೇಸಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.ಜೆಸಿಐ ಬೆಳ್ತಂಗಡಿಯ ಸದಸ್ಯರು, ಪದಾಧಿಕಾರಿಗಳು, ಪೂರ್ವಾಧ್ಯಕ್ಷರು ಉಪಸ್ಥಿತರಿದ್ದರು.

Related posts

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya
error: Content is protected !!