24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಮತ್ತು ಖಿಲರಿಯಾ ಸ್ವಲಾತ್ ಕಮಿಟಿ ಇದರ ಜಂಟಿ ಆಶ್ರಯದಲ್ಲಿ ಈದ್ ಮಿಲಾದ್ ಪ್ರಯುಕ್ತ 3 ದಿನಗಳ ಧಾರ್ಮಿಕ ಕಾರ್ಯಕ್ರಮ ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಜಮಾತ್ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸೆ. 3 ರಾತ್ರಿ ನಡೆದ ಮದರಸ ವಿದ್ಯಾರ್ಥಿಗಳ ಕಾರ್ಯಕ್ರಮವನ್ನು ತ್ವಾಹ ಜಿಫ್ರಿ ತಂಗಳ್ ಅವರ ದುವಾಶೀರ್ವಾದದೊಂದಿಗೆ ಮಸೀದಿ ಖತೀಬಾರದ ಹನೀಫ್ ಫೈಝಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮದರಸ ಪ್ರಾಧ್ಯಾಪಕರು, ಜಮಾತ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೆ.4 ರಾತ್ರಿ ಸಮಾರೋಪ ಸಮಾರಂಭ ಕಾರ್ಯಕ್ರಮ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಮದರಸ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಅತಿಥಿಯಾಗಿ ಆಗಮಿಸಿದ್ದ ಡ್ರಿಮ್ ಡೀಲ್ ಮಾಲೀಕರಾದ ಜ| ಮಹಮ್ಮದ್ ಸುಹೈಲ್ ಅವರನ್ನು ಸನ್ಮಾನಿಸಲಾಯಿತು.

ಖಿಲರ್ ಜುಮ್ಮಾ ಮಸೀದಿ ಸೇವೆ ನೀಡುತ್ತಿರುವ ಉಸ್ತಾದರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸೆ. 5 ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮವನ್ನು ಸ್ವಲಾತ್ ಕಮಿಟಿ ಅಧ್ಯಕ್ಷ ಹೈದರ್ ಬಿ.ಕೆ ನೆರವೇರಿಸಿದರು. ಗುರುವಾಯನಕೆರೆ ದರ್ಗಾ ಝೀಯಾರತ್ ನಂತರ ಮಸೀದಿಯಲ್ಲಿ ಮೌಲಿದ್ ಪಾರಾಯಣ ನಡೆಯಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಇದರ ಪದಾಧಿಕಾರಿಗಳು, ಖಿಲರಿಯಾ ಸ್ವಲಾತ್ ಕಮಿಟಿ ಪದಾಧಿಕಾರಿಗಳು, ಮಸೀದಿ ಉಸ್ತಾದರು, ಜಮಾತ್ ಬಾಂಧವರು, ಮಕ್ಕಳು, ಪೋಷಕರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ನಝೀರ್ ಬಿ ಎ, ಮಹಮ್ಮದ್ ಕೊಡಿ ಸಭೆ, ಬಿ. ಶೇಕುಂಞ್ಞ, ಶರೀಫ್ ಮಟ್ಲ, ರಝಕ್ ಕೊಡಿಸಭೆ, ಹೈದರ್ ಬಿ.ಕೆ, ಫೈಝಲ್ ಐ ಜೆ, ಇಸ್ಮಾಲಿ ಐ ಬಿ, ಹಾರಿಸ್ ಐ ಜೆ, ಅಬುಸಾಲಿ, ಎನ್ ಎಸ್ ಅಬ್ದುಲ್ ರಹಿಮಾನ್, ಖಾದರ್ ಕುದ್ರಡ್ಕ, ಮೊಯಿದಿನ್ ಬಿ ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya
error: Content is protected !!