September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

ಧಮ೯ಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಧರ್ಮ ಜಾಗೃತಿ ಸಮಾವೇಶ ಸೆ.5ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಎದುರಿನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಬಳಿಕ ಅಲ್ಲಿಂದ ಅಮೃತವರ್ಷಿಣಿ ಸಭಾಭವಕ್ಕೆ ಮೆರವಣಿಗೆಯಲ್ಲಿ ಆಗಮಿಸಿದರು.ಧಮ೯ಸ್ಥಳದ ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲನೆಗೊಳಿಸಿ ಧಮ೯ಜಗೃತಿ ಸಮಾವೇಶಕ್ಕೆ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ಲಕ್ಷ್ಮೀನಾರಾಯಣ ಅಸ್ರಣ್ಣರು, ಕಟೀಲು, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದಾಮೋದರ ಶರ್ಮಾ, ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟ, ವಿದ್ವಾನ್ ನಾಗೇಂದ್ರ ಭಾರದ್ವಾಜ, ಧನಂಜಯ ರಾವ್ ಬಿ.ಕೆ. ಮಾಜಿ ಸಚಿವ ಅಭಯಚಂದ್ರ ಜೈನ್, ಡಿ.ಹಷೇ೯ಂದ್ರ ಕುಮಾರ್, ಜೀವಂಧರ್ ಕುಮಾರ್ ಪಡ್ಡಾರಬೆಟ್ಟ, ಶರತ್ ಕೃಷ್ಣ ಪಡ್ವೆಟ್ನಾಯ ಉಜಿರೆ, ಶಶಿಧರ ಶೆಟ್ಟಿ ಬರೋಡ, ಶಿವಪ್ರಸಾದ್ ಅಜಿಲ ಸೇರಿದಂತೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು, ಧಾಮಿ೯ಕ ಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.


ಡಾ. ಎಂ.ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಸುವೀರ್ ಜೈನ್ ಧನ್ಯವಾದವಿತ್ತರು. ಎಸ್.ಡಿ.ಎಮ್ ಕಾಲೇಜು ಉಜಿರೆಯ ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!