22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

ಧಮ೯ಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಧರ್ಮ ಜಾಗೃತಿ ಸಮಾವೇಶ ಸೆ.5ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಎದುರಿನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಬಳಿಕ ಅಲ್ಲಿಂದ ಅಮೃತವರ್ಷಿಣಿ ಸಭಾಭವಕ್ಕೆ ಮೆರವಣಿಗೆಯಲ್ಲಿ ಆಗಮಿಸಿದರು.ಧಮ೯ಸ್ಥಳದ ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲನೆಗೊಳಿಸಿ ಧಮ೯ಜಗೃತಿ ಸಮಾವೇಶಕ್ಕೆ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ಲಕ್ಷ್ಮೀನಾರಾಯಣ ಅಸ್ರಣ್ಣರು, ಕಟೀಲು, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದಾಮೋದರ ಶರ್ಮಾ, ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟ, ವಿದ್ವಾನ್ ನಾಗೇಂದ್ರ ಭಾರದ್ವಾಜ, ಧನಂಜಯ ರಾವ್ ಬಿ.ಕೆ. ಮಾಜಿ ಸಚಿವ ಅಭಯಚಂದ್ರ ಜೈನ್, ಡಿ.ಹಷೇ೯ಂದ್ರ ಕುಮಾರ್, ಜೀವಂಧರ್ ಕುಮಾರ್ ಪಡ್ಡಾರಬೆಟ್ಟ, ಶರತ್ ಕೃಷ್ಣ ಪಡ್ವೆಟ್ನಾಯ ಉಜಿರೆ, ಶಶಿಧರ ಶೆಟ್ಟಿ ಬರೋಡ, ಶಿವಪ್ರಸಾದ್ ಅಜಿಲ ಸೇರಿದಂತೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು, ಧಾಮಿ೯ಕ ಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.


ಡಾ. ಎಂ.ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಸುವೀರ್ ಜೈನ್ ಧನ್ಯವಾದವಿತ್ತರು. ಎಸ್.ಡಿ.ಎಮ್ ಕಾಲೇಜು ಉಜಿರೆಯ ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!