24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

ಅಂಡಿಂಜೆ: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶಿವಮೊಗ್ಗದ ಗೀತ ನೃತ್ಯ ಕಲಾ ಕುಟೀರದ ವಿದ್ಯಾರ್ಥಿನಿ ಸಾನ್ವಿ ಸಾಲಿಯಾನ್ ಶೇ. 86.75 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾಳೆ.

ಈಕೆ ಗೀತ ನೃತ್ಯ ಕಲಾ ಕುಟೀರದ ನೃತ್ಯಗುರು ವಿದುಷಿ ಶ್ರೀಮತಿ ಕವನ ಭಾರ್ಗವ್ ಶಿಷ್ಯೆ. ಶಿವಮೊಗ್ಗದ ಪೊದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿರುವ ಈಕೆ ಪ್ರಸ್ತುತ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾಗಿರುವ ಅಂಡಿಂಜೆ ‘ವನಸಿರಿ’ಯ ಡಾ, ಸತೀಶ್ ಕುಮಾರ್ ಅಂಡಿಂಜೆ ಮತ್ತು ಶ್ರೀಮತಿ ವಿನಯಾ ದಂಪತಿಯ ಪುತ್ರಿ.

Related posts

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!