25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅಳದಂಗಡಿ: ಕಳೆದ 49 ವರ್ಷಗಳ ಹಿಂದೆ ಪ್ರಾರಂಭಗೊಂಡ ಅಳದಂಗಡಿ ಸಹಕಾರಿ ಸಂಘವು ರೈತ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಪಥದಲ್ಲಿ ಸಾಗಿದೆ. ಪ್ರಸಕ್ತ ಸಾಲಿನಲ್ಲಿ ಸಂಘವು ವಾರ್ಷಿಕವಾಗಿ ರೂ 461 ಕೋಟಿ ವ್ಯವಹಾರ ನಡೆಸಿ, ರೂ1.86 ಕೋಟಿ ಲಾಭ ಗಳಿಸಿದೆ ಎಂದು ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಹೇಳಿದರು.

ಅವರು ಸೆ. 5 ರಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ವೇ ಜನ ಸುಖಿನೋ ಭವಂತು ಎಂಬ ಧ್ಯೇಯದೊಂದಿಗೆ ಸಂಘವು ವ್ಯವಹಾರದೊಂದಿಗೆ ಸಮಾಜಮುಖಿಯಾಗಿಯು ಗುರುತಿಸಿಕೊಂಡಿದೆ. ಪ್ರಸ್ತುತ ವರ್ಷದ ಆರ್ಥಿಕ ಲೆಕ್ಕಚಾರದೊಂದಿಗೆ ಸದಸ್ಯರಿಗೆ ಶೇ.,14%ಡಿವಿಡೆಂಟ್ ನೀಡಲಾಗುವುದು ಎಂದರು.

ವಾರ್ಷಿಕ ಮಹಾಸಭೆಯಲ್ಲಿ ರೈತ ಸದಸ್ಯರ ಕ್ಷೇಮಾಭಿವೃದ್ಧಿ ಹಾಗೂ ವಿವಿಧ ಯೋಜನೆಗಳ ಬಗ್ಗೆ ಹಲವಾರು ಚರ್ಚೆಗಳು ನಡೆದವು.ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ, ನಿರ್ದೇಶಕರಾದ ಗುರುಪ್ರಸಾದ್, ವಿಶ್ವನಾಥ ಹೊಳ್ಳ, ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿಕೆ,ದೇಜಪ್ಪ ಪೂಜಾರಿ, ಕೊರಗಪ್ಪ,ಸುಂದರಿ, ಮಮತಾ, ಧರ್ಣಪ್ಪ ,ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಸತೀಶ್ ಕೆ,ಪ್ರಶಾಂತ್ ಎಸ್,ಭರತ್ ರಾಜ್, ಜಗದೀಶ್ ಶೆಟ್ಟಿ, ಮಮತಾ,ಸಂತೋಷ್, ಯತೀಶ್ ಡಿ, ಹರೀಶ್ ನಾಯ್ಕ, ದಿನೇಶ್ ಎ, ಶ್ರೀದೇವಿ, ಸುಮಲತಾ, ಪ್ರವೀಣ ಕೆ ಸಹಕರಿಸಿದರು.

Related posts

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya
error: Content is protected !!