September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ, ಇದರ 2024-25 ನೇ ವರ್ಷದ ವಾರ್ಷಿಕ ಮಹಾಸಭೆಯು ಸೆ. 04 ರಂದು ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.

ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ರವರು ವಹಿಸಿ ಮಾತನಾಡಿ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು ರೂ. 408 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ. 9252494.31 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಡ್ ವಿತರಣೆ ಮಾಡಲಾಗಿದೆ ಎಂದರು.

ಸಂಘವು ಆಡಿಟ್ ವರ್ಗೀಕರಣದಲ್ಲಿ ಎ ವರ್ಗ ಹೊಂದಿದ್ದು,ಪ್ರಾರಂಭದಲ್ಲಿ ನಿಧನ ಹೊಂದಿದ  ಸಂಘದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು . 

ಈ ಸಂದರ್ಭದಲ್ಲಿ ನಿರ್ದೇಶಕರಾದ ಅರುಣ ಕುಮಾರ್, ಗುರುರಾಜ್ ಅಂತರ, ಅರವಿಂದ ಕಾರಂತ ಕೆ. , ಅನಿಲ್ ಪ್ರಕಾಶ್ ಡಿ’ಸೋಜಾ, ಬಾಲಕೃಷ್ಣ ಗೌಡ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಶ್ರೀಮತಿ ವಾರಿಜ ಎಸ್ ಗೌಡ. ಅಣ್ಣು ನಾಯ್ಕ , ಸಾದು ಎಂ, ಮತ್ತು ಸಂಘದ , ಸುದರ್ಶನ್ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಸದಾಶಿವ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ಸಿ ರೈ ವರದಿ ಮಂಡಿಸಿದರು. ಸಿಬ್ಬಂದಿ ಮೋಹನ ಗೌಡ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ರಜತ ಗೌಡ ವಂದಿಸಿದರು.

Related posts

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya
error: Content is protected !!