23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ, ಇದರ 2024-25 ನೇ ವರ್ಷದ ವಾರ್ಷಿಕ ಮಹಾಸಭೆಯು ಸೆ. 04 ರಂದು ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.

ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ರವರು ವಹಿಸಿ ಮಾತನಾಡಿ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು ರೂ. 408 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ. 9252494.31 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಡ್ ವಿತರಣೆ ಮಾಡಲಾಗಿದೆ ಎಂದರು.

ಸಂಘವು ಆಡಿಟ್ ವರ್ಗೀಕರಣದಲ್ಲಿ ಎ ವರ್ಗ ಹೊಂದಿದ್ದು,ಪ್ರಾರಂಭದಲ್ಲಿ ನಿಧನ ಹೊಂದಿದ  ಸಂಘದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು . 

ಈ ಸಂದರ್ಭದಲ್ಲಿ ನಿರ್ದೇಶಕರಾದ ಅರುಣ ಕುಮಾರ್, ಗುರುರಾಜ್ ಅಂತರ, ಅರವಿಂದ ಕಾರಂತ ಕೆ. , ಅನಿಲ್ ಪ್ರಕಾಶ್ ಡಿ’ಸೋಜಾ, ಬಾಲಕೃಷ್ಣ ಗೌಡ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಶ್ರೀಮತಿ ವಾರಿಜ ಎಸ್ ಗೌಡ. ಅಣ್ಣು ನಾಯ್ಕ , ಸಾದು ಎಂ, ಮತ್ತು ಸಂಘದ , ಸುದರ್ಶನ್ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಸದಾಶಿವ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ಸಿ ರೈ ವರದಿ ಮಂಡಿಸಿದರು. ಸಿಬ್ಬಂದಿ ಮೋಹನ ಗೌಡ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ರಜತ ಗೌಡ ವಂದಿಸಿದರು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya
error: Content is protected !!