July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸೆ.5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.

ಸಂಘವು ವರದಿ ಸಾಲಿನಲ್ಲಿ ರೂ.1100 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.3.00ಕೋಟಿ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಸದಸ್ಯರಿಗೆ ಶೇ.18 ಡಿವಿಡೆಂಟ್ ಘೋಷಿಸಿದರು.


ಬೆಳ್ತಂಗಡಿಯಲ್ಲಿ ಸೊಸೈಟಿಗೆ 11 1/2 ಸೆಂಟ್ಸ್ ಜಾಗ ಖರೀದಿ ಮಾಡಲಾಗಿದೆ. 2030 ಕ್ಕೆ ಸೊಸೈಟಿಗೆ ಬೆಳ್ಳಿ ಹಬ್ಬ ಸಂದರ್ಭದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಈ ವರ್ಷದಲ್ಲಿ ಧರ್ಮಸ್ಥಳದಲ್ಲಿ ಒಂದು ಶಾಖೆ ಹಾಗೂ ಮಂಗಳೂರಿನಲ್ಲಿ ಮೂರು ಶಾಖೆ ಒಟ್ಟು 4 ಶಾಖೆ ಪ್ರಾರಂಭಗೊಳ್ಳಲಿದೆ ಎಂದರು.

ಮುಖ್ಯ ಕಾರ್ಯನಿರ್ವಣಧಿಕಾರಿ ಸುಜಯ್ ಶೆಟ್ಟಿ ವರದಿ ಮಂಡಿಸಿದರು

ವೇದಿಕೆಯಲ್ಲಿ ನಿರ್ದೇಶಕರಾದ ಎಂ. ಜಿ. ಶೆಟ್ಟಿ.ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ, ಕೃಷ್ಣ ರೈ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ, ಜಯರಾಮ ಶೆಟ್ಟಿ ಮುಂಡಾಡಿ ಗುತ್ತು, ಸಾರಿಕಾ ಶೆಟ್ಟಿ, ವಿಜಯ ಬಿ. ಶೆಟ್ಟಿ ಖಾಯಂ ಆಹ್ವಾನಿತರು, ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.

ಸಂಸ್ಥೆಯ ಮಾರ್ಗದರ್ಶಕರಾದ ಉದ್ಯಮಿ ಶಶಿಧರ ಶೆಟ್ಟಿ, ಜಯರಾಮ್ ಶೆಟ್ಟಿ ಅವರ ಸಾಧನೆಯನ್ನು ಸಭೆಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷ ಜಯರಾಮ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ದೇರಳಕಟ್ಟೆ ಶಾಖೆಯಲ್ಲಿ ಕೆಲಸ ಮಾಡಿದ ನವೀನ್ ರೈರವನ್ನು ಗೌರವಿಸಿ ಬೀಳ್ಕೊಡಲಾಯಿತು.
ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮವನ್ನು ನಿರೂಪಿಸಿ, ಉಪಾಧ್ಯಕ್ಷ ಜಯಂತ ಶೆಟ್ಟಿ ಸ್ವಾಗತಿಸಿ, ನಿರ್ದೇಶಕರಾದ ಸೀತಾರಾಮ್ ಶೆಟ್ಟಿ ಧನ್ಯವಾದವಿತ್ತರು.

Related posts

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya
error: Content is protected !!