23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

ಧಮ೯ಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಧರ್ಮ ಜಾಗೃತಿ ಸಮಾವೇಶ ಸೆ.5ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಎದುರಿನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಬಳಿಕ ಅಲ್ಲಿಂದ ಅಮೃತವರ್ಷಿಣಿ ಸಭಾಭವಕ್ಕೆ ಮೆರವಣಿಗೆಯಲ್ಲಿ ಆಗಮಿಸಿದರು.ಧಮ೯ಸ್ಥಳದ ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲನೆಗೊಳಿಸಿ ಧಮ೯ಜಗೃತಿ ಸಮಾವೇಶಕ್ಕೆ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ಲಕ್ಷ್ಮೀನಾರಾಯಣ ಅಸ್ರಣ್ಣರು, ಕಟೀಲು, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದಾಮೋದರ ಶರ್ಮಾ, ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟ, ವಿದ್ವಾನ್ ನಾಗೇಂದ್ರ ಭಾರದ್ವಾಜ, ಧನಂಜಯ ರಾವ್ ಬಿ.ಕೆ. ಮಾಜಿ ಸಚಿವ ಅಭಯಚಂದ್ರ ಜೈನ್, ಡಿ.ಹಷೇ೯ಂದ್ರ ಕುಮಾರ್, ಜೀವಂಧರ್ ಕುಮಾರ್ ಪಡ್ಡಾರಬೆಟ್ಟ, ಶರತ್ ಕೃಷ್ಣ ಪಡ್ವೆಟ್ನಾಯ ಉಜಿರೆ, ಶಶಿಧರ ಶೆಟ್ಟಿ ಬರೋಡ, ಶಿವಪ್ರಸಾದ್ ಅಜಿಲ ಸೇರಿದಂತೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು, ಧಾಮಿ೯ಕ ಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.


ಡಾ. ಎಂ.ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಸುವೀರ್ ಜೈನ್ ಧನ್ಯವಾದವಿತ್ತರು. ಎಸ್.ಡಿ.ಎಮ್ ಕಾಲೇಜು ಉಜಿರೆಯ ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya
error: Content is protected !!