July 23, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೋಷಣಾ ಜಾಗೃತಿ ಕಾರ್ಯಕ್ರಮ

ಉಜಿರೆ: ಪೋಷಣಾ ಮಾಸಾಚರಣೆಯ ಅಂಗವಾಗಿ, ಎಸ್‌ಡಿಎಂ ಕಾಲೇಜಿನ ಡಯಟ್ ಮತ್ತು ನ್ಯೂಟ್ರಿಷನ್ ವಿಭಾಗವು ಉಜಿರೆಯ ಎಸ್‌ಡಿಎಂ ಡಿ-ಅಡಿಕ್ಷನ್ ಸೆಂಟರ್‌ನ ಪ್ರತಿನಿಧಿಗಳಿಗಾಗಿ ಸೆ.6ರಂದು ಪೋಷಣಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು.

ಈ ಕಾರ್ಯಕ್ರಮವನ್ನು ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಮೂಲ ವೈದ್ಯಕೀಯ ವಿಜ್ಞಾನ ವಿಭಾಗದ ಡೀನ್ರಾದ ಡಾ. ಬಾಲಕೃಷ್ಣ ಶೆಟ್ಟಿ ಅವರು ಯೋಜನಾಧಿಕಾರಿಗಳಾದ ಮಾಧವ್ ಗೌಡ ಅವರ ಸಾನ್ನಿಧ್ಯದಲ್ಲಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಅಭಯ್ ಸಾಯಿ, ಪಿ.ಜಿ. ವಿದ್ಯಾರ್ಥಿ, ಅವರು ವ್ಯಸನಮುಕ್ತ ಜೀವನದಲ್ಲಿ ಸಮತೋಲಿತ ಆಹಾರದ ಮಹತ್ವ, ಪೌಷ್ಠಿಕಾಂಶಗಳ ಅಗತ್ಯತೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪನ್ಯಾಸ ನೀಡಿದರು. ಡಿ-ಅಡಿಕ್ಷನ್ ಕೇಂದ್ರದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಆರೋಗ್ಯಕರ ಆಹಾರ ಪದ್ಧತಿಗಳ ಕುರಿತು ಜ್ಞಾನವನ್ನು ಪಡೆದುಕೊಂಡರು.

Related posts

ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲೂಕಿಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya
error: Content is protected !!