25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ.29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು.

ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ ವಿಭಾಗ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಡಾ. ರವೀಶ್ ಪಡುಮಲೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ವಿದ್ಯಾರ್ಥಿ ವೃಂದಕ್ಕೆ ತಿಳಿಸಿದರು.

ವಿದ್ಯಾರ್ಥಿನಿ ಸಹನ ಪ್ರತಿಜ್ಞಾವಿಧಿ ಭೋದಿಸಿದರು. ವೇದಿಕೆಯಲ್ಲಿ ಗದ್ದೆಯ ಮಾಲೀಕರಾದ ಶ್ರೀಮತಿ ಶಾರದಾ ಮತ್ತು ಮಂಜುನಾಥ ಮುಂಡತೋಡಿ ಉಪಸ್ಥಿತರಿದ್ದರು.

ಸುಮಾರು 450 ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್, ನಿತಿನ್, ಚರಣ್ ಸಹಕಾರ ನೀಡಿದರು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya
error: Content is protected !!