30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!