September 6, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya
error: Content is protected !!