July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ.29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು.

ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ ವಿಭಾಗ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಡಾ. ರವೀಶ್ ಪಡುಮಲೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ವಿದ್ಯಾರ್ಥಿ ವೃಂದಕ್ಕೆ ತಿಳಿಸಿದರು.

ವಿದ್ಯಾರ್ಥಿನಿ ಸಹನ ಪ್ರತಿಜ್ಞಾವಿಧಿ ಭೋದಿಸಿದರು. ವೇದಿಕೆಯಲ್ಲಿ ಗದ್ದೆಯ ಮಾಲೀಕರಾದ ಶ್ರೀಮತಿ ಶಾರದಾ ಮತ್ತು ಮಂಜುನಾಥ ಮುಂಡತೋಡಿ ಉಪಸ್ಥಿತರಿದ್ದರು.

ಸುಮಾರು 450 ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್, ನಿತಿನ್, ಚರಣ್ ಸಹಕಾರ ನೀಡಿದರು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!