23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ.29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು.

ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ ವಿಭಾಗ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಡಾ. ರವೀಶ್ ಪಡುಮಲೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ವಿದ್ಯಾರ್ಥಿ ವೃಂದಕ್ಕೆ ತಿಳಿಸಿದರು.

ವಿದ್ಯಾರ್ಥಿನಿ ಸಹನ ಪ್ರತಿಜ್ಞಾವಿಧಿ ಭೋದಿಸಿದರು. ವೇದಿಕೆಯಲ್ಲಿ ಗದ್ದೆಯ ಮಾಲೀಕರಾದ ಶ್ರೀಮತಿ ಶಾರದಾ ಮತ್ತು ಮಂಜುನಾಥ ಮುಂಡತೋಡಿ ಉಪಸ್ಥಿತರಿದ್ದರು.

ಸುಮಾರು 450 ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್, ನಿತಿನ್, ಚರಣ್ ಸಹಕಾರ ನೀಡಿದರು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya
error: Content is protected !!