ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.
ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.











