22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಪ್ರವೇಶ ಪರೀಕ್ಷೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕ್

Suddi Udaya
error: Content is protected !!