September 6, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲುಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!