September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸೆ.5 ರಂದು ಬೆಳಗ್ಗೆ 11:30 ಕ್ಕೆ ಬೆಳ್ತಂಗಡಿ ಕಚೇರಿಗೆ ಆಗಮಿಸಿ ಗಿರೀಶ್ ಮಟ್ಟಣ್ಣ‌ನವರ್ , ಜಯಂತ್. ಟಿ , ಯೂಟ್ಯೂಬರ್ ಅಭಿಷೇಕ್, ಸೌಜನ್ಯ ಮಾವ ವಿಠಲ ಗೌಡ ನನ್ನು ಖುದ್ದು ವಿಚಾರಣೆ ಮಾಡಿ ರಾತ್ರಿ 11 ಗಂಟೆಗೆ ವಾಪಸ್ ಮಂಗಳೂರಿಗೆ ತೆರಳಿದ್ದಾರೆ.

ಬುರುಡೆ ಚಿನ್ನಯ್ಯ ಇಂದು ಕೋರ್ಟಿಗೆ :
ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಆ23 ರಂದು ಚಿನ್ನಯ್ಯ ನನ್ನು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು. ಶನಿವಾರ ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಬುರುಡೆ ಪ್ರಕರರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ನ ವಿಚಾರಣೆ ಬಹುತೇಕ ಮುಗಿದಿರುವುದಾಗಿ ತಿಳಿದು ಬಂದಿದ್ದು ಎಸ್.ಐ.ಟಿ ತಂಡಈತನನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಕಡಿಮೆಯಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಚಿನ್ನಯ್ಯನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಗಳು ಹೆಚ್ಚಾಗಿದೆ

Related posts

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya
error: Content is protected !!