ಬೆಳ್ತಂಗಡಿ: ಸುಬ್ರಹ್ಮಣ್ಯ ಸಮಾಜ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವು ಅವರಿಗೆ ಸಮಾಜ ರತ್ನ ಪ್ರಶಸ್ತಿ ಒಳಿದು ಬಂದಿದೆ.
ಸೆಪ್ಟೆಂಬರ್ 14 ರಂದು ದೇರಳಕಟ್ಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಯಲ್ಲಿ ನಮ್ಮ ಡಾ. ರವಿ ಕಕ್ಕೆಪದವು ಅವರು ಸಮಾಜ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಅಶಕ್ತರಿಗೆ ನೆರವು, ಸ್ವಚ್ಚತಾ ಕಾರ್ಯ,ಹಲವಾರು ಬಡ ಕುಟುಂಬಗಳಿಗೆ ಆಶ್ರಯ, ವೈದ್ಯಕೀಯ ನೆರವು,ಅನಾರೋಗ್ಯದಿಂದ ಬಳಲುತ್ತಿರುವವರ ಸೇವೆ ಹೀಗೆ ಅನೇಕ ರೀತಿಯಲ್ಲಿ ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.











