ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ.29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು.

ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ ವಿಭಾಗ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಡಾ. ರವೀಶ್ ಪಡುಮಲೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ವಿದ್ಯಾರ್ಥಿ ವೃಂದಕ್ಕೆ ತಿಳಿಸಿದರು.

ವಿದ್ಯಾರ್ಥಿನಿ ಸಹನ ಪ್ರತಿಜ್ಞಾವಿಧಿ ಭೋದಿಸಿದರು. ವೇದಿಕೆಯಲ್ಲಿ ಗದ್ದೆಯ ಮಾಲೀಕರಾದ ಶ್ರೀಮತಿ ಶಾರದಾ ಮತ್ತು ಮಂಜುನಾಥ ಮುಂಡತೋಡಿ ಉಪಸ್ಥಿತರಿದ್ದರು.

ಸುಮಾರು 450 ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್, ನಿತಿನ್, ಚರಣ್ ಸಹಕಾರ ನೀಡಿದರು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya
error: Content is protected !!