September 6, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!