ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಲಯದಲ್ಲಿ ವಾದ- ಪ್ರತಿವಾದ ನಡೆದು ಚಿನ್ನಯ್ಯನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ. ಭದ್ರತಾ ದೃಷ್ಟಿಯಿಂದ ಚಿನ್ನಯ್ಯನನ್ನು ನ್ಯಾಯಾಲಯ ಶಿವಮೊಗ್ಗ ಜೈಲಿಗೆ ಕಳುಹಿಸಿದೆ.











