July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸೆ.5 ರಂದು ಬೆಳಗ್ಗೆ 11:30 ಕ್ಕೆ ಬೆಳ್ತಂಗಡಿ ಕಚೇರಿಗೆ ಆಗಮಿಸಿ ಗಿರೀಶ್ ಮಟ್ಟಣ್ಣ‌ನವರ್ , ಜಯಂತ್. ಟಿ , ಯೂಟ್ಯೂಬರ್ ಅಭಿಷೇಕ್, ಸೌಜನ್ಯ ಮಾವ ವಿಠಲ ಗೌಡ ನನ್ನು ಖುದ್ದು ವಿಚಾರಣೆ ಮಾಡಿ ರಾತ್ರಿ 11 ಗಂಟೆಗೆ ವಾಪಸ್ ಮಂಗಳೂರಿಗೆ ತೆರಳಿದ್ದಾರೆ.

ಬುರುಡೆ ಚಿನ್ನಯ್ಯ ಇಂದು ಕೋರ್ಟಿಗೆ :
ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಆ23 ರಂದು ಚಿನ್ನಯ್ಯ ನನ್ನು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು. ಶನಿವಾರ ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಬುರುಡೆ ಪ್ರಕರರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ನ ವಿಚಾರಣೆ ಬಹುತೇಕ ಮುಗಿದಿರುವುದಾಗಿ ತಿಳಿದು ಬಂದಿದ್ದು ಎಸ್.ಐ.ಟಿ ತಂಡಈತನನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಕಡಿಮೆಯಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಚಿನ್ನಯ್ಯನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಗಳು ಹೆಚ್ಚಾಗಿದೆ

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya
error: Content is protected !!