25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.೫ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ಪದ್ಮಾವತಿ ಕುಶಾಲಪ್ಪ ರೈ ಪದ್ಮುಂಜ ಹಾಗೂ ನಂದಿನಿ ವಸಂತ್ ಶರ್ಮ ಉಜಿರೆ ಇವರನ್ನು ಸನ್ಮಾನಿಸಲಾಯಿತು.

ಸನ್ಮಾನ ಪತ್ರವನ್ನು ವಲಯದ ಮಾಜಿ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಹಾಗೂ ವಲಯದ ಪ್ರಧಾನ ಕಾರ್ಯದರ್ಶಿ ವಿಜಯ ಹೆಚ್. ಭಟ್ ಓದಿದರು. ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ನಿಯೋಜಿತ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ವಲಯದ ಗೌರವ ಸಲಹೆಗಾರರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು. ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಸ್ವಾಗತಿಸಿ, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ದಾಮೋದರ್ ವಂದಿಸಿದರು.

Related posts

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya
error: Content is protected !!