September 6, 2026
ಬೆಳ್ತಂಗಡಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆ

ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಭಾರತೀಯ ಆಚರಣೆಗಳನ್ನು ಉಳಿಸಿ ಬೆಳೆಸುವ ಸದುದ್ದೇಶದಿಂದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆಯನ್ನು ಆಯೋಜಿಸಲಾಗಿತ್ತು.

ಪ್ರಾಂಶುಪಾಲರಾದ ಸಂತೋಷ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಓಣಂ ನೃತ್ಯಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗಾಗಿ ಪೂಕಳಂ ಸ್ಪರ್ಧೆ, ರಾಂಪ್ ವಾಕ್ ಮತ್ತು ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಆಚರಣೆಯ ವಿಶೇಷ ಆಕರ್ಷಣೆಯಾಗಿ ಪೂಕಳಂ ಸ್ಪರ್ಧೆ ನಡೆಯಿತು. ಇದರಲ್ಲಿ ವಿದ್ಯಾರ್ಥಿಗಳು ಓಣಂ ಹಬ್ಬದ ಸಾರವನ್ನು ಪ್ರತಿಬಿಂಬಿಸುವ ಸುಂದರ ಹೂವಿನ ವಿನ್ಯಾಸಗಳನ್ನು ಪ್ರದರ್ಶಿಸಿದರು.

ಈ ಕಾರ್ಯಕ್ರಮವು ಕ್ಯಾಂಪಸ್‌ನಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು.ಕಾರ್ಯಕ್ರಮದ ಸಂಯೋಜಕ ಈಶ್ವರ್ ಶರ್ಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya
error: Content is protected !!