July 23, 2026
ಬೆಳ್ತಂಗಡಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆ

ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಭಾರತೀಯ ಆಚರಣೆಗಳನ್ನು ಉಳಿಸಿ ಬೆಳೆಸುವ ಸದುದ್ದೇಶದಿಂದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆಯನ್ನು ಆಯೋಜಿಸಲಾಗಿತ್ತು.

ಪ್ರಾಂಶುಪಾಲರಾದ ಸಂತೋಷ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಓಣಂ ನೃತ್ಯಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗಾಗಿ ಪೂಕಳಂ ಸ್ಪರ್ಧೆ, ರಾಂಪ್ ವಾಕ್ ಮತ್ತು ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಆಚರಣೆಯ ವಿಶೇಷ ಆಕರ್ಷಣೆಯಾಗಿ ಪೂಕಳಂ ಸ್ಪರ್ಧೆ ನಡೆಯಿತು. ಇದರಲ್ಲಿ ವಿದ್ಯಾರ್ಥಿಗಳು ಓಣಂ ಹಬ್ಬದ ಸಾರವನ್ನು ಪ್ರತಿಬಿಂಬಿಸುವ ಸುಂದರ ಹೂವಿನ ವಿನ್ಯಾಸಗಳನ್ನು ಪ್ರದರ್ಶಿಸಿದರು.

ಈ ಕಾರ್ಯಕ್ರಮವು ಕ್ಯಾಂಪಸ್‌ನಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು.ಕಾರ್ಯಕ್ರಮದ ಸಂಯೋಜಕ ಈಶ್ವರ್ ಶರ್ಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!