25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸ್ಥಿತಿ ಗಂಭೀರ

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

ಪ್ರಾಥಮಿಕ ಮಾಹಿತಿಯಂತೆ, KSRTC ಬಸ್ ಗ್ಯಾಸ್ ಸಿಲಿಂಡರ್ ಹೊತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಹಿಂಬದಿಯಿಂದ ಮತ್ತೊಂದು ಲಾರಿ ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ತೀವ್ರಗೊಂಡಿದೆ. ಇದರಲ್ಲಿ KSRTC ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಭಾರೀ ವಾಹನ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.ಘಟನೆಯ ಮಾಹಿತಿ ಪಡೆದ ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related posts

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya
error: Content is protected !!