September 6, 2026
ಅಪಘಾತಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸ್ಥಿತಿ ಗಂಭೀರ

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

ಪ್ರಾಥಮಿಕ ಮಾಹಿತಿಯಂತೆ, KSRTC ಬಸ್ ಗ್ಯಾಸ್ ಸಿಲಿಂಡರ್ ಹೊತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಹಿಂಬದಿಯಿಂದ ಮತ್ತೊಂದು ಲಾರಿ ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ತೀವ್ರಗೊಂಡಿದೆ. ಇದರಲ್ಲಿ KSRTC ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಭಾರೀ ವಾಹನ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.ಘಟನೆಯ ಮಾಹಿತಿ ಪಡೆದ ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related posts

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!