23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸ್ಥಿತಿ ಗಂಭೀರ

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

ಪ್ರಾಥಮಿಕ ಮಾಹಿತಿಯಂತೆ, KSRTC ಬಸ್ ಗ್ಯಾಸ್ ಸಿಲಿಂಡರ್ ಹೊತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಹಿಂಬದಿಯಿಂದ ಮತ್ತೊಂದು ಲಾರಿ ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ತೀವ್ರಗೊಂಡಿದೆ. ಇದರಲ್ಲಿ KSRTC ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಭಾರೀ ವಾಹನ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.ಘಟನೆಯ ಮಾಹಿತಿ ಪಡೆದ ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related posts

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!