July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ ಹದಿಮೂರನೇ ಅಧ್ಯಾಯ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದ ಉಪನ್ಯಾಸವನ್ನು ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ಭಟ್ ಅಧ್ಯಕ್ಷರು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಇವರು ನೀಡಿ ಭಗವದ್ಗೀತೆಯ 13 ನೇ ಅಧ್ಯಾಯ ದೇಹ ಮತ್ತು ಆತ್ಮ ಇವುಗಳ ನಡುವಿನ ವ್ಯತ್ಯಾಸವನ್ನು ವಿವರಿಸುವ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದಲ್ಲಿ ಪ್ರಕೃತಿ, ಪುರುಷ, ಜ್ಞಾನ ಮತ್ತು ಜ್ಞೇಯ , ಜ್ಞಾನದ ಸ್ವರೂಪ, ಮೋಕ್ಷದ ಮಾರ್ಗ, ಆತ್ಮದ ಸ್ವರೂಪದ ಬಗ್ಗೆ ಶ್ರೀ ಕೃಷ್ಣ ಭಗವಂತ ಅರ್ಜುನನಿಗೆ ನೀಡಿದ ವಿವರಣೆಯನ್ನು ಸಾಹಿತ್ಯದ ಅನೇಕ ಉದಾಹರಣೆಗಳೊಂದಿಗೆ ಮನ ಮುಟ್ಟುವಂತೆ ವಿವರಿಸಿದರು.

ಪತ್ರಕರ್ತರ ಮನೋಹರ ಬಳಂಜ ಅದ್ಯಕ್ಷತೆ ವಹಿಸಿ ಮಾತನಾಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ತಾಲೂಕು ಸಮಿತಿ ಆಯೋಜಿಸಿರುವ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ..ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ತಿಳಿಸಿ, ಇದರ ಪ್ರಯೋಜನವನ್ನು ಯುವಜನರು ಪಡೆಯುವಂತಾಗಲಿ ಎಂದರು.

ವಸಂತಿ ಕುಳಮರ್ವ ಕಾರ್ಯಕ್ರಮವನ್ನು ನಿರೂಪಿಸಿ, ಡಾ. ಶ್ರೀಧರ ಭಟ್ ವಂದಿಸಿದರು.ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿದರು.

Related posts

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!