September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸೆ. 1 ರಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ ಮಾಹಿತಿ ಕಾರ್ಯಗಾರ ಪರಿಸರ ಸಂಘದ ವತಿಯಿಂದ ನಡೆಯಿತು.


ಇನೆಸ್ಪಕ್ಟರ್ ಶಾಂತಿಲಾಲ್ ಜಟ್ಟಿ NDRF ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಕೆಲಸ ನಿರ್ವಹಣೆ ಮಾಡುತ್ತದೆ ಎಂದು ತಿಳಿಸಿದರು. ಹೆಡ್ ಕಾನ್ಸ್ಟೇಬಲ್ ಶಂಕರಪ್ಪ ಇದರ ಮುಖ್ಯ ಕರ್ತವ್ಯಗಳು ,ಭೂಕಂಪ, ನೆರೆ ಸುನಾಮಿ ಚಂಡಮಾರುತ ಅಗ್ನಿ ಅವಘಡ, ಅಣು ದುರಂತ, ತುರ್ತು ವೈದ್ಯಕೀಯ ನೆರವು, ವಿಪತ್ತು ಸಂಭವಿಸಿದ ಪ್ರದೇಶದಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಚರಣೆ, ಇವುಗಳ ಬಗ್ಗೆ ಮಾಹಿತಿ ನೀಡಿದರು.ಹೆಡ್ ಕಾನ್ಸ್ಟೇಬಲ್ ಗಳಾದ ಸಿಟಿ ದಿವಕರ್ ರೆಡ್ಡಿ, ಸಿ.ಟಿ ಅಲ್ಬಿನ್ , ಸಿ.ಟಿ ಸತೀಶ್ ನಾಯ್ಕ್, ಸಿ.ಟಿ ಸಿರಿಲಾಲ್ ಇವರುಗಳು ಯಾವ ರೀತಿ ಅಪಘಾತಗಳು ಸಂಭವಿಸಿದಾಗ ಮುನ್ನೇ಼ಚರಿಕೆ ಕ್ರಮವನ್ನು ಡೆಮೋ ಮಾಡಿ ತೋರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯರಾದ ಸುರೇಶ್ .ಕೆ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನೆಗಳನ್ನು ವಿವರಿಸಿದರು.


ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿದರು, ರಕ್ಷಿತಾ ವಂದಿಸಿದರು, ಶ್ರುತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Related posts

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya
error: Content is protected !!