25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.


ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬAಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತçಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

Related posts

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya
error: Content is protected !!