23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.


ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬAಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತçಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

Related posts

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
error: Content is protected !!