July 23, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.


ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬAಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತçಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!