26.1 C
ಪುತ್ತೂರು, ಬೆಳ್ತಂಗಡಿ
September 10, 2026
ರಾಜಕೀಯ

ಉಜಿರೆ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

ಉಜಿರೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 08 ರಂದು ಉಜಿರೆ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಶಾರದಾ ಮಂಟಪ ಸಭಾಭವನದಲ್ಲಿ ನಡೆಯಿತು.ಪಕ್ಷದ ಹಿರಿಯ ಕಾರ್ಯಕರ್ತರಾದ ರಘುನಾಥ್ ಶೆಣೈ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.

ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟನಾ ಭಾಷಣ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಾಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಪಕ್ಷದ ಪ್ರಮುಖರಾದ ನಂದಕುಮಾರ್, ಕೃಷ್ಣಮೂರ್ತಿ, ವೃಷಾoಖ್ ಖಾಡಿಲ್ಕರ್ ಬೈಠಕ್ ತೆಗೆದುಕೊಂಡರು. ದಿನಕರ್ ಕುಲಾಲ್ ರವರು ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಂಡಲ ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಅರಣೆಪಾದೆ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವoತ್ ಗೌಡ ಪುದುವೆಟ್ಟು, ಪ್ರಧಾನ ಕಾರ್ಯದರ್ಶಿ ನಿರಂಜನ್ , ಕೇಶವ ಭಟ್ ಅತ್ತಾಜೆ, ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಭಾಸ್ಕರ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಶ್ರೀಮತಿ ಶಶಿಕಲಾ ಪಂಚಾಯತ್ ಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ಮಿಲ್ಕ್ ಸೊಸೈಟಿ ನಿರ್ದೇಶಕರುಗಳು, ಪಂಚಾಯತ್ ಸದಸ್ಯರು ಗಳು, ಬೂತ್ ಪದಾಧಿಕಾರಿಗಳು, ಪಕ್ಷದ ಅನ್ಯನ್ಯ ಜವಾಬ್ದಾರಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಉಜಿರೆ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಕಿರಣ್ ಕಾರಂತ್ ಸ್ವಾಗತಿಸಿ, ಬಿಜೆಪಿ ಗೀತೆ ಸಂಧ್ಯಾ ಹಾಗೂ ಸಂಘದ ಗೀತೆ ಜಯಲಕ್ಷ್ಮೀ ಯವರು ಹಾಡಿದರು,ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಜಯಂತ್ ಕಾರ್ಯಕ್ರಮ ನಿರೂಪಿಸಿ, ಉಜಿರೆ ಪಂಚಾಯತ್ ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲುರವರು ಧನ್ಯವಾದವಿತ್ತರು.

Related posts

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya
error: Content is protected !!