23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸೆ. 7ರಂದು ಕೃಷಿ ಪತ್ತಿನ ಸಹಕಾರಿ ಸಂಘದ ಕನಸು ರೈತ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಪಿ ಜಯರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 32,31,82,518.48 ವ್ಯವಹಾರ ನಡೆಸಿ, ವಾರ್ಷಿಕ ಹಾಲು ಖರೀದಿ 18,30,216.1 ಲೀಟರ್ , ಒಟ್ಟು ಮೊತ್ತ 6,60,57212, ರೂ. 49,24,391.64 ನಿವ್ವಳ ಲಾಭ, ರೂ. 27,47,646 ಉತ್ಪಾದಕರಿಗೆ ಬೋನಸ್ ನೀಡಿದೆ ಎಂದರು.

ಸುಮಾರು ರೂ. 88000 ವನ್ನು 22 ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೂಲಕ ನೀಡಲಾಯಿತು. ಸದಸ್ಯರ ಕ್ಷೇಮನಿಧಿಯಿಂದ ಸುಮಾರು ರೂ. 95000 ಗಳನ್ನು ಆರ್ಥಿಕ ಸಹಾಯಧನ ನೀಡಲಾಯಿತು.

ಸಂಘದ ಮಾಜಿ ನಿರ್ದೇಶಕ ಸೇಸಪ್ಪ ಸಾಲಿಯಾನ್ ರವರು ಹಾಲಿಗೂ ಪಶು ಆಹಾರದ ದರಕ್ಕೂ ವಿಪರೀತ ಏರುಪೇರು ಇದ್ದು ಕನಿಷ್ಢ ರೂ. 50 ಪ್ರತಿ ಲೀಟರ್ ಗೆ ದೊರೆಯುವ ಬಗ್ಗೆ ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ಪತ್ರ ಬರೆಯುವಂತೆ ಮಹಾಸಭೆಯಲ್ಲಿ ನಿರ್ಣಹಿಸಬೇಕೆಂದು ಒತ್ತಾಯಿಸಿದರು. ಮಹಾಸಭೆಗೆ ಆಗಮಿಸಿದ ವಾರ್ಷಿಕ ಅವಧಿಯಲ್ಲಿ ಹಾಲು ಪೂರೈಸಿದ ಎಲ್ಲಾ ಸದಸ್ಯರಿಗೆ ಕುಕ್ಕರ್ ನೀಡಲಾಯಿತು. ಹಾಗೂ ಅತೀ ಹೆಚ್ಚು ಹಾಲು ಪೂರೈಸಿದ 10 ಜನ ಸದಸ್ಯರು ಹಾಗೂ 10000 ಲೀಟರ್ ಗಿಂತ ಅಧಿಕ ಹಾಲು ಪೂರೈಸಿದ 25ಜನ ಸದಸ್ಯರನ್ನು ಗೌರವಿಸಲಾಯಿತು.

ಈ ವೇಳೆ ಮುಖ್ಯಮಂತ್ರಿ ಪದಕ ಪಡೆದ ಎಂ ಪ್ರವೀಣ್, ಏಕಾಂಗಿಯಾಗಿ 2-3 ದನಗಳನ್ನು ಸಾಕಿಕೊಂಡು ಹೈನುಗಾರಿಕೆ ನಡೆಸುತ್ತಿರುವ ಶ್ರೀಮತಿ ಸರಸ್ವತಿ ಹಾಗೂ ಹೇರಾಜೆ ಸರಕಾರಿ ಶಾಲೆಯನ್ನು ಆರಂಭಿಸಿದ ಅಬ್ದುಲ್ ರಹಿಮಾನ್ ಪಿ.ಕೆ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಪ್ರಮೀಳಾ ಪ್ರಾರ್ಥಿಸಿದರು. ನಿರ್ದೇಶಕ ಜನಾರ್ದನ ಗೌಡ ಸ್ವಾಗತಿಸಿದರು. ಒಕ್ಕೂಟದ ಅನುದಾನಗಳ ಬಗ್ಗೆ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ವಿವರಿಸಿದರು. ಕಾರ್ಯದರ್ಶಿ ಜಯರಾಜ್ ನಿರೂಪಿಸಿ, ನಿರ್ದೇಶಕ ಪಿ ಕೃಷ್ಣಪ್ಪ ವಂದಿಸಿದರು,

Related posts

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya
error: Content is protected !!