July 23, 2026
ರಾಜಕೀಯ

ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ

ನಡ :ಲಾಯಿಲ ಮಹಾಶಕ್ತಿ ಕೇಂದ್ರದ ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಅಂಗಣದಲ್ಲಿ ನೆರವೇರಿತು. ಅಭ್ಯಾಸ ವರ್ಗದ ಉದ್ಘಾಟನೆಯನ್ನು ಹಿರಿಯರಾದ ರಾಘವ ಆಚಾರ್ಯ ಇವರು ನೆರವೇರಿಸಿದರು ಜೊತೆಗೆ ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಾಯಿಲ, ವರ್ಗದ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಭಾರಿ ಜಯಂತ್ ಗೌಡ ಗುರಿಪಳ್ಳ ಹಾಗೂ ಉದ್ಘಾಟನಾ ಭಾಷಣವನ್ನು ಪ್ರಮುಖರಾದ ಅಜಿತ್ ಅರಿಗ ಇವರು ನಡೆಸಿ ಕೊಟ್ಟರು.
ಪ್ರಥಮ ಅವಧಿಯನ್ನು ರವಿ ಇಳಂತಿಲ, ಎರಡನೆಯ ಅವಧಿಯನ್ನು ಜಿಲ್ಲೆಯ ಕಾರ್ಯದರ್ಶಿ ಸೀತಾರಾಮ ಬೆಲಾಳ್, ಮೂರನೇ ಅವಧಿಯನ್ನು ಸುಧೀರ್ ಸುವರ್ಣ ಇವರು ನೆರವೇರಿಸಿದರು.


ಸಮಾರೋಪ ಸಮಾರಂಭದ ಮುಖ್ಯ ಭಾಷಣಕಾರರಾಗಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಇವರು ಸಮಾರೋಪದ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರಂಕಿ, ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ,ನಡ ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಕನ್ಯಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಅಶೋಕ್ ಶೆಟ್ಟಿ ಇವರು ಉಪಸ್ಥಿತರಿದ್ದರು.
ಅಭ್ಯಾಸ ವರ್ಗದಲ್ಲಿ ನಡ ಪಂಚಾಯತ್ ಸದಸ್ಯರುಗಳು, ಹಾಲಿನ ಸೊಸೈಟಿಯ ನಿರ್ದೇಶಕರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿಗಳು, ಹಾಗೂ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya
error: Content is protected !!