July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ನಾರಾವಿ: “ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದದ್ದು. ವಿದ್ಯಾರ್ಥಿಗಳು ಮಾಡುವ ತಪ್ಪುಗಳನ್ನು ಎತ್ತಿ ತೋರಿಸದೆ ನಯವಾಗಿ ತಿದ್ದಿ ಅವರನ್ನು ಸರಿದಾರಿಗೆ ತರುವವನೇ ನಿಜವಾದ ಶಿಕ್ಷಕ. ಗುರು ಶಿಷ್ಯರ ಸಂಬಂಧ ಅಮರವಾದುದು “ಎಂದು ಸಂತ ಅಂತೋನಿ ಕಾಲೇಜಿನ ಪ್ರಾoಶುಪಾಲ ಸಂತೋಷ್ ಸಲ್ದಾನ ಹೇಳಿದರು.

ಅವರು ಸಂತ ಅಂತೋನಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು. ವೇದಿಕೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಕು. ಗ್ಲೆನಿಷಾ ಸ್ವಾಗತಿಸಿದರು. ಕು ಕಾವ್ಯ, ಡಾ. ಸರ್ವ ಪಳ್ಳಿ ರಾಧಾಕೃಷ್ಣನ್ ಅವರ ಜೀವನ ಸಾಧನೆಯನ್ನು ವಿವರಿಸಿದರು. ಕು ಶೈಲಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪದವಿ ಕಾಲೇಜು ವಿದ್ಯಾರ್ಥಿಗಳು ಎಲ್ಲಾ ಉಪನ್ಯಾಸಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ರಂಜಿಸಿದರು.

Related posts

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!