September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಪಾಂಡವರಕಲ್ಲು: ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪ್ರಗತಿ ಬಂಧು ಒಕ್ಕೂಟಗಳ ( ಬಡಗಕಜೆಕಾರು -ಮಾಡಪಲಿಕೆ -ತೆಂಕಕಜೆಕಾರು ) ಸಹಯೋಗದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸಕರಾಗಿ ಮಾತನಾಡಿದ ಸುರತ್ಕಲ್ ಶ್ರೀ ಗೋವಿಂದ ದಾಸ ಕಾಲೇಜ್ ಉಪನ್ಯಾಸಕಿ ಅಕ್ಷತಾ ರವರು ಹಿಂದೂ ಧರ್ಮದ ಬಗ್ಗೆ ತುಳುನಾಡಿನ ಸಂಸ್ಕೃತಿ ಬಗ್ಗೆ ಧರ್ಮವನ್ನು ಮಾನವ ಜೀವನದಲ್ಲಿ ಅಳವಡಿಸುವ ಬಗ್ಗೆ ಹಾಗೆನೇ ಒಂದು ಕುಟುಂಬ ಧಾರ್ಮಿಕ ನೆಲೆಯಲ್ಲಿ ಯಾವ ರೀತಿ ಬದುಕಬೇಕು ಧರ್ಮದ ನೆಲೆಗಟ್ಟು ದೈವ ದೇವರ ಅನುಸರಣೆ ಹಾಗೂ ಉಪಾಸನ ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಮನಮುಟ್ಟುವಂತೆ ವಿವರಿಸಿದ್ದರು.

ಜಯಾನಂದ ಪಿ ಇವರು ಕಜೆಕಾರು ಭಕ್ತರ ಧರ್ಮ ಜಾಗೃತಿ ಹಾಗೂ ಕ್ಷೇತ್ರದ ಪರಂಪರೆಯ ಬಗ್ಗೆ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಸದಾ ಬೆನ್ನೆಲುಬಾಗಿ ನಿಲ್ಲುತೆ ಎಂಬ ಮಾತಿನೊಂದಿಗೆ ಮುಂಬರುವ ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ ಭಜನಾ ಕಮ್ಮಟಕ್ಕೆ ಶ್ರೀ ಕ್ಷೇತ್ರದ ಅಭಿನಂದನೆಗೆ ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದ ಭಜನಾ ಮಂಡಳಿ ಆಯ್ಕೆಯಾದದ್ದನ್ನು ಪ್ರಕಟಿಸಿ ಅಭಿನಂದಿಸಿದರು.

ವೇದಿಕೆಯಲ್ಲಿ ಕಜೆಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಬಂಗೇರ, ಉಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಸಂತ ಸಾಲಿಯನ್ ರಾಮನಗರ ಉಪಸ್ಥಿತರಿದ್ದರು. ಒಕ್ಕೂಟದ ಪದಾಧಿಕಾರಿಗಳು, ಸಿ ಎ ಬ್ಯಾಂಕಿನ ನಿರ್ದೇಶಕರು, ಪಂಚಾಯಿತಿ ಸದಸ್ಯರು, ಊರ ಗಣ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಕ್ಷೇತ್ರದ ಜೀರ್ಣೋದರ ಸಮಿತಿಯ ಅಧ್ಯಕ್ಷ ಗುಣಶೇಖರ ಕೊಡಂಗೆ ಪ್ರಸ್ತಾಪಿಸಿ ಸ್ವಾಗತಿಸಿದರು, ಸೇವಾನಿರತೆ ಸುಧಾ ರೈ ವಂದಿಸಿದರು, ಗ್ರಾಮ ಪಂಚಾಯತ್ ಅಧ್ಯಕ್ಷ ದೇವದಾಸ್ ಅಬುರ ಕಾರ್ಯಕ್ರಮ ನಿರೂಪಿಸಿದರು.

Related posts

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya
error: Content is protected !!