23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ ಪುತ್ತಿಲರವರು ನೆರವೇರಿಸಿ, ಮಕ್ಕಳಿಗೆ ಶುಭಹಾರೈಸಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿ.ಸೋಮಶೇಖರ್ ಶೆಟ್ಟಿಯವರು ದುಶ್ಚಟದಿಂದ ಮಕ್ಕಳು ದೂರ ಇರಬೇಕು. ತಂದೆ ತಾಯಿಗೆ ಉತ್ತಮ ಮಕ್ಕಳಾಗಿ ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆಯಬೇಕು ಮದ್ಯಪಾನ, ಸಿಗರೇಟ್, ಗಾಂಜಾ, ಆಫೀಮ್ ಇವುಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮೂಡಿ ಬರಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ರಾಜಶೇಖರ ರೈ, ಶಾಲೆಯ ಮುಖ್ಯೋಪಾಧ್ಯಾಯರಾದ ಮಹೇಂದ್ರ ಪೂಜಾರಿ, ಪುತ್ತಿಲ ಒಕ್ಕೂಟದ ಕಾರ್ಯದರ್ಶಿಯಾದ ಸುಖಲತಾ, ಸೇವಾಪ್ರತಿನಿಧಿಯಾದ ಸುನೀತಾ ಹಾಗೂ ಶಾಲೆಯ ಶಿಕ್ಷಕ ವೃಂದಾದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಕಾರ್ಯಕ್ರಮ ನಿರೂಪಿಸಿ , ಸೇವಾಪ್ರತಿನಿಧಿ ಶಾಂತ ಸ್ವಾಗತಿಸಿ, ಶಿಕ್ಷಕ ಪ್ರದೀಪ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya
error: Content is protected !!