25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಇಂದು ಕನ್ಯಾ ಮರಿಯಮ್ಮರವರ ಹುಟ್ಟು ಹಬ್ಬವಾದ ಮೊಂತಿ ಹಬ್ಬ ( ತೆನೆ ಹಬ್ಬ) ವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.


ಬೆಳ್ತಂಗಡಿ ಚರ್ಚ್ ಬಸ್ ಸ್ಟಾಂಡ್ ಸರ್ವಿಸ್ ರೋಡ್ ನಲ್ಲಿ ಹಿಮಾಲಯ ಚಿಕನ್ ಫಾರ್ಮ್ ಬಳಿ ಹಾಕಲಾದ ಭವ್ಯ ಮಂಟಪದಲ್ಲಿ ಕನ್ಯಾ ಮರಿಯಮ್ಮರವರ ಪ್ರಾರ್ಥನೆ ಹಾಗೂ ತೆನೆಯ ಆಶೀರ್ವಚನ ನಡೆಯಿತು.


ಚರ್ಚಿನ ಪ್ರದಾನ ಧರ್ಮ ಗುರುಗಳಾದ ಅತಿ ವಂದನೀಯ ಫಾ. ವಾಲ್ಟರ್ ಡಿಮೆಲ್ಲೋ, ವಂದನೀಯ ಫಾ. ಕ್ಲಿಫರ್ಡ್ ಪಿಂಟೊ, ಅತಿಥಿ ಗುರುಗಳಾದ ವo. ಫಾ. ಕಿರಣ್ ಲೋಬೊ ಹಾಗು ವo. ಫಾ. ಆಲ್ವಿನ್ ಮಾಡ್ತಾರವರು ಹಾಜರಿದ್ದರು. ಫಾ. ಕ್ಲಿಫರ್ಡ್ ಪಿಂಟೊರವರು ಮೊಂತಿ ಹಬ್ಬದ ದಿನದ ಮಹತ್ವವನ್ನು ತಿಳಿಸಿದರು.


ಫಾ. ಕಿರಣ್ ಲೋಬೊರವರು ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಪ್ರಧಾನ ಗುರುಗಳಾದ ಫಾ. ವಾಲ್ಟರ್ ಡಿ’ಮೆಲ್ಲೊ ಪ್ರಾರ್ಥನೆ ನಡೆಸಿಕೊಟ್ಟರು.
ನಂತರ ಭವ್ಯ ಮೆರವಣಿಗೆ ಚರ್ಚ್ ತನಕ ನಡೆಯಿತು. ಚರ್ಚ್ ನಲ್ಲಿ ಸಂಭ್ರಮದ ದಿವ್ಯ ಬಲಿ ಪೂಜೆ, ಹೊಸ ತೆನೆ ಚರ್ಚಿನ ಪ್ರತಿ ಕುಟುಂಬಕ್ಕೆ ವಾಳೆಯ ಗುರಿಕಾರರು ವಿತರಿಸಿದರು. ಕನ್ಯಾ ಮರಿಯಮ್ಮರಿಗೆ ಹೂಗಳನ್ನು ತಂದು ಅರ್ಪಿಸಿದ ಮಕ್ಕಳಿಗೆ ಕಬ್ಬು ಹಾಗೂ ಬಂದಂತಹ ಎಲ್ಲರಿಗೆ ಸಿಹಿಯನ್ನು ವಿತರಿಸಲಾಯಿತು.
ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೊ, ಪಾಲನ ಮಂಡಳಿಯ ಸದಸ್ಯರು ಹಾಗೂ 18 ವಾಳೆಯ ಗುರಿಕಾರರು ಸಹಕರಿಸಿದರು.

Related posts

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!