July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚಾರಿಸಲಾಯಿತು.


ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್ ಗಳಲ್ಲಿ ದಿವ್ಯ ಬಲಿ ಪೂಜೆಯನ್ನು ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದರು. 9 ದಿನಗಳ ನೊವೆನಾ ಆಚರಣೆಯಲ್ಲಿ ಪ್ರಾರ್ಥನೆ ಧ್ಯಾನ ಭಕ್ತಿಗೀತೆಗಳು ಹಾಗೂ ವಿಶೇಷ ಉದ್ದೇಶಕ್ಕಾಗಿ ಪ್ರಾರ್ಥನೆಯ ಸಲ್ಲಿಸಲಾಯಿತು. ಮೊಂತಿ ಹಬ್ಬದ ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ, ಪ್ರಧಾನ ದಿವ್ಯ ಬಲಿ ಪೂಜೆಯನ್ನು ಫಾ.ಬರ್ನಾಡ್ ರೋಡ್ರಿಗಸ್ ತೆನೆ ಆಶೀರ್ವದಿಸಿ ಸಂದೇಶ ನೀಡಿದರು. ಶಿವಮೊಗ್ಗ ಧರ್ಮ ಪ್ರಾಂತ್ಯದಲ್ಲಿ ಸೇವೆ ಸಲ್ಲಿಸುವ ಫಾ. ಫೆಡ್ರಿಕ್ ಕೋರೆಯ ಸಹಕರಿಸಿದರು.

ವಾಹನಗಳ ಆಶೀರ್ವಚನ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ ಹಾಗೂ ಪುಷ್ಪಾರ್ಪಣೆ ಸಲ್ಲಿಸಿದ್ದ ಪುಟಾಣಿ ಮಕ್ಕಳಿಗೆ ಹಾಗೂ ಎಲ್ಲರಿಗೂ ಕಬ್ಬು ಹಾಗೂ ಸಿಹಿ ತಿಂಡಿ. ಸ್ತ್ರೀ ಸಂಘ ದವರು ವಿತರಿಸಲಾಯಿತು.
ಆರ್ಥಿಕ ಧನ ಸಹಾಯ ಮಾಡಿದ ದಾನಿಗಳಿಗೆ ಮೇಣದಬತ್ತಿ ವಿತರಿಸಿ ಗೌರವಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಆರ್ಥಿಕ ಸಮಿತಿ ಸದಸ್ಯರು ಗುರಿಕಾರರು , ಚರ್ಚ್ ಪಾಲನಾ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya
error: Content is protected !!