25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಹೂವಿನ ಪೂಜೆ ಎಡಪದವು ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಸೆ.6ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಗಣಪತಿ ಹೋಮ, ಪವಮಾನ ಹೋಮ ನಡೆಯಿತು. ಬಳಿಕ ದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ನೇತೃತ್ವದಲ್ಲಿ ಮಧ್ಯಾಹ್ನ ವೀರಮಾರುತಿ ದೇವರಿಗೆ ವಿಶೇಷ ಹೂವಿನ ಪೂಜೆ, ಮಹಾಪೂಜೆ ನಡೆಯಿತು.

ಸಂಜೆ ಮಹಾರಂಗಪೂಜೆ ಬಳಿಕ ದೀಪಾರಾಧನೆ ಜರುಗಿತು. ಕಾರ್ಕಳ ಹಾಗೂ ಮೂಡುಬಿದಿರೆ ವಲಯ ಮಹಿಳಾ ಸಂಘದ ಸದಸ್ಯೆಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ದೇವಸ್ಥಾನದ ಆಡಳಿತ ಮೊಕೇಸರ ಶ್ಯಾಮ ಹೆಗ್ಡೆ, ಕಾರ್ಯದರ್ಶಿ ಅನಿಲ್ ಹೆಗ್ಡೆ ಹಾಗೂ ಮೊತ್ತೇಸರರು, ಜಿಲ್ಲಾ ಹೆಗ್ಗಡೆ ಸಂಘದ ಅಧ್ಯಕ್ಷ ಹಟ್ಟಾಜೆಗುತ್ತು ಪ್ರಭಾಕರ ಹೆಗ್ಡೆ, ಕಾರ್ಯದರ್ಶಿ ಶುಭರಾಜ್ ಹೆಗ್ಡೆ ಹಾಗೂ ಸದಸ್ಯರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಕಾರ್ಯದರ್ಶಿ ಲತಾ ಯು.ಹೆಗ್ಡೆ, ಮೂಡುಬಿದಿರೆ ವಲಯ ಮಹಿಳಾ ಘಟಕ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ಹೆಗ್ಗಡೆ ಸಂಘ ಮೂಡುಬಿದಿರೆ ವಲಯದ ಅಧ್ಯಕ್ಷ ಸದಾಶಿವ ಹೆಗ್ಡೆ, ಕಾರ್ಯದರ್ಶಿ ಜಯರಾಮ ಹೆಗ್ಡೆ, ವಿವಿಧ ವಲಯಗಳ ಅಧ್ಯಕ್ಷರು, ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಉದಯ ಕುಮಾರ್ ಹೆಗ್ಡೆ, ಸಂಘದ ಮಾಜಿ ಅಧ್ಯಕ್ಷ ನವೀನ್ ಹೆಗ್ಡೆ ಮತ್ತಿತರರಿದ್ದರು.

Related posts

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!