ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಹೂವಿನ ಪೂಜೆ ಎಡಪದವು ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಸೆ.6ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಗಣಪತಿ ಹೋಮ, ಪವಮಾನ ಹೋಮ ನಡೆಯಿತು. ಬಳಿಕ ದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ನೇತೃತ್ವದಲ್ಲಿ ಮಧ್ಯಾಹ್ನ ವೀರಮಾರುತಿ ದೇವರಿಗೆ ವಿಶೇಷ ಹೂವಿನ ಪೂಜೆ, ಮಹಾಪೂಜೆ ನಡೆಯಿತು.

ಸಂಜೆ ಮಹಾರಂಗಪೂಜೆ ಬಳಿಕ ದೀಪಾರಾಧನೆ ಜರುಗಿತು. ಕಾರ್ಕಳ ಹಾಗೂ ಮೂಡುಬಿದಿರೆ ವಲಯ ಮಹಿಳಾ ಸಂಘದ ಸದಸ್ಯೆಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ದೇವಸ್ಥಾನದ ಆಡಳಿತ ಮೊಕೇಸರ ಶ್ಯಾಮ ಹೆಗ್ಡೆ, ಕಾರ್ಯದರ್ಶಿ ಅನಿಲ್ ಹೆಗ್ಡೆ ಹಾಗೂ ಮೊತ್ತೇಸರರು, ಜಿಲ್ಲಾ ಹೆಗ್ಗಡೆ ಸಂಘದ ಅಧ್ಯಕ್ಷ ಹಟ್ಟಾಜೆಗುತ್ತು ಪ್ರಭಾಕರ ಹೆಗ್ಡೆ, ಕಾರ್ಯದರ್ಶಿ ಶುಭರಾಜ್ ಹೆಗ್ಡೆ ಹಾಗೂ ಸದಸ್ಯರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಕಾರ್ಯದರ್ಶಿ ಲತಾ ಯು.ಹೆಗ್ಡೆ, ಮೂಡುಬಿದಿರೆ ವಲಯ ಮಹಿಳಾ ಘಟಕ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ಹೆಗ್ಗಡೆ ಸಂಘ ಮೂಡುಬಿದಿರೆ ವಲಯದ ಅಧ್ಯಕ್ಷ ಸದಾಶಿವ ಹೆಗ್ಡೆ, ಕಾರ್ಯದರ್ಶಿ ಜಯರಾಮ ಹೆಗ್ಡೆ, ವಿವಿಧ ವಲಯಗಳ ಅಧ್ಯಕ್ಷರು, ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಉದಯ ಕುಮಾರ್ ಹೆಗ್ಡೆ, ಸಂಘದ ಮಾಜಿ ಅಧ್ಯಕ್ಷ ನವೀನ್ ಹೆಗ್ಡೆ ಮತ್ತಿತರರಿದ್ದರು.

Related posts

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!