22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ ಹದಿಮೂರನೇ ಅಧ್ಯಾಯ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದ ಉಪನ್ಯಾಸವನ್ನು ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ಭಟ್ ಅಧ್ಯಕ್ಷರು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಇವರು ನೀಡಿ ಭಗವದ್ಗೀತೆಯ 13 ನೇ ಅಧ್ಯಾಯ ದೇಹ ಮತ್ತು ಆತ್ಮ ಇವುಗಳ ನಡುವಿನ ವ್ಯತ್ಯಾಸವನ್ನು ವಿವರಿಸುವ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದಲ್ಲಿ ಪ್ರಕೃತಿ, ಪುರುಷ, ಜ್ಞಾನ ಮತ್ತು ಜ್ಞೇಯ , ಜ್ಞಾನದ ಸ್ವರೂಪ, ಮೋಕ್ಷದ ಮಾರ್ಗ, ಆತ್ಮದ ಸ್ವರೂಪದ ಬಗ್ಗೆ ಶ್ರೀ ಕೃಷ್ಣ ಭಗವಂತ ಅರ್ಜುನನಿಗೆ ನೀಡಿದ ವಿವರಣೆಯನ್ನು ಸಾಹಿತ್ಯದ ಅನೇಕ ಉದಾಹರಣೆಗಳೊಂದಿಗೆ ಮನ ಮುಟ್ಟುವಂತೆ ವಿವರಿಸಿದರು.

ಪತ್ರಕರ್ತರ ಮನೋಹರ ಬಳಂಜ ಅದ್ಯಕ್ಷತೆ ವಹಿಸಿ ಮಾತನಾಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ತಾಲೂಕು ಸಮಿತಿ ಆಯೋಜಿಸಿರುವ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ..ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ತಿಳಿಸಿ, ಇದರ ಪ್ರಯೋಜನವನ್ನು ಯುವಜನರು ಪಡೆಯುವಂತಾಗಲಿ ಎಂದರು.

ವಸಂತಿ ಕುಳಮರ್ವ ಕಾರ್ಯಕ್ರಮವನ್ನು ನಿರೂಪಿಸಿ, ಡಾ. ಶ್ರೀಧರ ಭಟ್ ವಂದಿಸಿದರು.ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿದರು.

Related posts

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya
error: Content is protected !!